Total Pageviews

Thursday 17 November 2022

 ದಿಗಂಬರವೇ ದಿವ್ಯಾಂಬರ

ಪಂಪ ರನ್ನ ಜನ್ನರು ಸಾಕು ಅರಿವುದು ಸೌಜನ್ಯ
ಕೋಟಿ ಜೀವರಾಶಿಗಳ ಜಗದಲ್ಲಿ ಮನುಷ್ಯನೇ ವಿಶ್ವಮಾನ್ಯ
ಗ್ಯಾಲಕ್ಸಿಗಳ ಬ್ರಹ್ಮಾಂಡದಲ್ಲಿ ನಾವು ತೃಣ ಸಾಮಾನ್ಯ
ನ್ಯಾಯದ ಗುಡಿಯಿದು ಪರಿಮಳದ ಶ್ರೀಗಂಧದ ಅರಣ್ಯ


ಕೋಮಲವಾಗಿ ಬಳುಕುವ ಬಿಳಿಯಿರುವುದೆಲ್ಲ ಹಾಲಲ್ಲ 
ಎಂದರು ಕುವೆಂಪು ಸಚಿವ ಮಂಡಲವೆಂದೂ ಶಾಶ್ವತವಲ್ಲ
ನಂಬದಿರಿ ಕಿವಿ ಕಚ್ಚಿ ಹಾಡುವ ಹಾಲುಗಲ್ಲ
ಎದುರಾಗುವವರೆಲ್ಲರೂ ಬಾಗುವ ಸಣ್ಣತನಗಳ ಜಾಳಲ್ಲ


ತಲ್ಲಣಿಸದಿರು ಕಂಡ್ಯ ತಾಳು ಮನವೆಂದರು ದಾಸರು
ಹೊರಡುವ ಹಾದಿಯೊಂದೇ ನಾವು ಭಗವಂತನ ದಾಸರು
ಭುವನ ಗೆದ್ದ ತಥಾಗತನಿಗೆ ಹೆಸರು ಮಂದಹಾಸರು
ಕಾಯಕವೇ ಕೈಲಾಸ ಬೇಕೆ ಹಂಗಿನರಮನೆಯ ಹೆಸರು?


ವಿಚಾರಿಸಿದರೆ ತಪ್ಪು ಒಪ್ಪುಗಳ ಪ್ರಶ್ನೆ  ಅನಂತ
ಆರಾಧಿಸಿದರೆ ಸಾಕು ಸರಸ್ವತಿಯ  ಏಕಾಂತ
ದಿಗಂಬರವೇ ದಿವ್ಯಾಂಬರ ಅಕ್ಕಮಹಾದೇವಿಯ ಪಂಥ
ತಿದ್ದಿ ಬೆಳಕಾಗಬೇಕೆನ್ನುವುದೇ ಭುವನದ ಮನುಜ ಮತ

ದಿಗಂಬರವೇ ದಿವ್ಯಾಂಬರ



ಪಂಪ ರನ್ನ ಜನ್ನರು ಸಾಕು ಅರಿವುದು ಸೌಜನ್ಯ
ಕೋಟಿ ಜೀವರಾಶಿಗಳ ಜಗದಲ್ಲಿ ಮನುಷ್ಯನೇ ವಿಶ್ವಮಾನ್ಯ
 ಸಾವಿರ ಗ್ಯಾಲಕ್ಸಿಗಳ ಬ್ರಹ್ಮಾಂಡದಲ್ಲಿ ನಾವು ತೃಣ ಸಾಮಾನ್ಯ
ನ್ಯಾಯದ ಗುಡಿಯಿದು ಪರಿಮಳದ ಶ್ರೀಗಂಧದ ಅರಣ್ಯ

ಕೋಮಲವಾಗಿ ಬಳುಕುವ ಬಿಳಿಯಿರುವುದೆಲ್ಲವೂ ಹಾಲಲ್ಲ 
ಎಂದರಂದು ಕುವೆಂಪು ಸಚಿವ ಮಂಡಲವೆಂದೂ ಶಾಶ್ವತವಲ್ಲ
ನಂಬದಿರಿ ಕಿವಿ ಕಚ್ಚಿ ಹಾಡುವ ಹಾಲುಗಲ್ಲ
ಎದುರಾಗುವವರೆಲ್ಲರೂ ಬಾಗುವ ಸಣ್ಣತನಗಳ ಜಾಳಲ್ಲ

ತಲ್ಲಣಿಸದಿರು ಕಂಡ್ಯ ತಾಳು ಮನವೆಂದರು ದಾಸರು
ಹೊರಡುವ ಹಾದಿಯೊಂದೇ ನಾವು ಭಗವಂತನ ದಾಸರು
ಭುವನ ಗೆದ್ದ ತಥಾಗತನಿಗೆ ಹೆಸರು ಮಂದಹಾಸರು
ಕಾಯಕವೇ ಕೈಲಾಸ ಬೇಕೆ ಹಂಗಿನರಮನೆಯ ಹೆಸರು ?

ವಿಚಾರಿಸಿದರೆ ತಪ್ಪು ಒಪ್ಪುಗಳ ಪ್ರಶ್ನೆ  ಅನಂತ
ಆರಾಧಿಸಿದರೆ ಸಾಕು ಸರಸ್ವತಿಯ  ಏಕಾಂತ
ದಿಗಂಬರವೇ ದಿವ್ಯಾಂಬರ ಅಕ್ಕಮಹಾದೇವಿಯ ಪಂಥ
ತಿದ್ದಿ ಬೆಳಕಾಗಬೇಕೆನ್ನುವುದೇ ಭುವನದ ಮನುಜ ಮತ

Friday 14 January 2022

ಸಂಕ್ರಮಣ

ಸಂಕ್ರಮಣ



ಸಂಕ್ರಮಣವೆಂದಾರಂಭಿಸಿದ ಆಗಂತುಕ ಪಯಣ
ಅನಂತದವರೆಗೂ ಸೆಳೆದುಕೊಂಡ ಸತ್ಯಗಳ ಅರುಣ 
ಕಂಡ ದಾರಿಯದೋ ಬಲು ಹಿತ ಒಮ್ಮೊಮ್ಮೆ ದಾರುಣ
ಎಲ್ಲಿರುವನೋ ಆವರಿಸಿ ಹಸಿಯಾಗಿಸುವ ಚೈತನ್ಯದ ವರುಣ


ಹೊರಟ ಹಾದಿ ಹೊರಳಿತಲ್ಲ ಕಾಲವೇ ನೀ ಕಾರಣ
ಏರಿದರೂ ಮುಗಿಯದು; ಇದೆಂತಹ ಚಿರ ಚಾರಣ
ತೊಟ್ಟಂತಿಹುದು ಇಳೆಯಿಂದು ಬಿಸಿಲ ಸ್ವರ್ಣದಾಭರಣ
ಕ್ಷಣ ಕ್ಷಣವೂ ಹೊಸದು ; ಕಾಲವೇ ನಿನ್ನ ಪವಿತ್ರ ಚರಣ


ಹೊರಳಿದಾಗೊಮ್ಮೆ ನಿನ್ನಂತಾಗಬೇಕು; ರಹಸ್ಯವೇನು ತರುಣ
ನೇಸರನಿಗೂ ದಯಪಾಲಿಸಿರುವೆ ; ನಿತ್ಯೋತ್ಸವ ಜನನ
ಹಾದಿಯಲ್ಲೊಮ್ಮೆ ಮೈಲುಗಲ್ಲಾದೆ; ತೀರಿಸುವುದೆಂತು ಋಣ
ಜೀವವಿದು ನಿತ್ಯ ಹರಿದು ಪರಿಚಲಿಸುವ ಹೊಂಬಾಣ


ಭುವಿ ತಿರುಗುವ ಸದ್ದೆಲ್ಲಿಹುದೋ ಪುನೀತವಾಗಬೇಕಿವೆ ಕರಣ
ಪ್ರಾಣವೆಲ್ಲವೂ ಅರಿತರಿಯದಂತೆ ನಿನ್ನೊಳಗೆ ಹರಣ
ಕಾಯುವೆಯಾ ಕೊನೆಯವರೆಗೂ; ನಂಬಿದೆ ನಾಗಾಭರಣ
ಉತ್ತರಾಯಣದ ಪ್ರಶ್ನೆಗಳಿಂದರಿತೆ ಸೃಷ್ಟಿಯ ಧಾರಣ


ಬಯಸಿದ ಬೀದಿಯೆಲ್ಲವೂ ವಿಸ್ಮಯದ ಹೂರಣ
ಹಾಡಬೇಕೆನ್ನಿಸಿದೆ ಹಕ್ಕಿಗಳೊಂದಿಗೆ  ರಸರಾಗ ತಾನನ
ಶಿಶುಪುಷ್ಯನಿಗೆಲ್ಲದೆ ನಿತ್ಯ ಭೋಗಿಸುವ ಭಾಗ್ಯದ ಭೋಜನ
ಗಿಡಮರಗಳಿಗೆ ಮೈಸವರುವ ಸಮಯವಿದುವೇ ಅಭ್ಯಂಜನ

 ಉಳುಕು                          ಆಗಾಗ ಉಳುಕುತಿರಬೇಕು ಸರಾಗ ಹೆಜ್ಜೆಗಳು                           ಸತ್ಯದ ಮರ್ಮವನ್ನರಿಯಲು ಬೇಕು ಉಳುಕಿನ ಗೆಜ್ಜೆಗಳು        ...