Total Pageviews
Thursday, 6 September 2018
ವಾಗ್ಬಾಣಗಳ ಚತುರ ಕವಿ
ಕಾವ್ಯಶಿಲ್ಪಿ ಶ್ರೀ ವಾಜಪೇಯಿ
ರಾಜಕಾರಣಕೆ ಪಾಠ ಹೇಳಿದ
ಸದನದ ಕಲಿ ಭಾರತ ಭೀಷ್ಮ
ಅಸ್ತಂಗತ ಮುತ್ಸದ್ದಿಯ ನೇಸರ
ಯುಗನಾಯಕನೀ ಭಾರತ ಭೂಶಿರ
ಮೊಳಗಿಸಿದೆ ಪಾಂಚಜನ್ಯವ
ಬೆಳಗಿದೆ ದೇಶ ನಿನ್ನಯ ಕಾಂತಿಗೆ
ಹೆಮ್ಮೆಯ ಪುತ್ರ ಭಾರತ ಮಾತೆಗೆ
ಬೆರಗಾಗಿದೆ ಜಗವು ನಿನ್ನಾರ್ಭಟಕೆ
ವಿಸ್ಮಯಗೊಂಡಿದೆ ನಿನ್ನಯ ಶಾಂತಿಗೆ
ಶಕ್ತಿ ಯುಕ್ತಿಗಳ ಸಮನ್ವಯದಾತ
ಚತುರಮತಿಯ ಆಡಳಿತದೂತ
ರಾಜತಂತ್ರದ ವಿಕಾಸಪುರುಷ
ಪ್ರಧಾನಿಯ ಪದಕೆ ನೀ ಅನ್ವರ್ಥ
ಸಂಸತ್ ಪಟುವಿಗೆ ನೀನೇ ಪಾರ್ಥ
ಅನ್ಯರು ಹೊಗಳುವ ಅಜಾತಶತ್ರು
ಕಂಡ ಕನಸಿನ ವಿಕಾಸದ ಕರ್ತೃ
ಜನಸೇವೆಯೇ ಜನಾರ್ಧನ ಸೇವೆ
ತೋರಿದೆ ನೀನು ಓ ಕವಿಹೃದಯಿ
ಭಾರತಮಾತೆಯ ಕೀರ್ತಿ ಪತಾಕೆ
ವಿಶ್ವಕೆ ತೋರಿದ ಮಹಾಮಾತೃಕೆ
Subscribe to:
Posts (Atom)
ಚಹಾ ಮತ್ತು ನಾನು
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...
-
'ತುಘಲಕ್'ನೊಂದಿಗೆ ಮಾತಿಗಿಳಿದಾಗ... ಪುರಾಣವನ್ನಾಧರಿಸಿದ 'ಯಯಾತಿ' ಚರಿತ್ರೆಯನ್ನಾಧರಿಸಿದ 'ತುಘಲಕ್' ನಂತಹ ಶ್ರೇಷ್ಠ ನಾಟಕಗಳನ...
-
ಚಂದ್ರಗಿರಿಯ ತೀರದಲ್ಲಿ ಮಹಿಳೆ... ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭ. ಅಂತಿಮ ವರ್ಷದ ಬಿ ಎ ತರಗತಿಯಲ್ಲಿ ( ಐಚ್ಛಿಕ ಕನ್ನಡ ವಿಷಯ) ಸ್ತ್ರೀ ಸಂವೇದನೆಯ, ಬಂಡಾಯ ಲೇಖಕ...
-
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...


