Total Pageviews
Thursday, 17 November 2022
ದಿಗಂಬರವೇ ದಿವ್ಯಾಂಬರ
ಪಂಪ ರನ್ನ ಜನ್ನರು ಸಾಕು ಅರಿವುದು ಸೌಜನ್ಯಕೋಟಿ ಜೀವರಾಶಿಗಳ ಜಗದಲ್ಲಿ ಮನುಷ್ಯನೇ ವಿಶ್ವಮಾನ್ಯ ಸಾವಿರ ಗ್ಯಾಲಕ್ಸಿಗಳ ಬ್ರಹ್ಮಾಂಡದಲ್ಲಿ ನಾವು ತೃಣ ಸಾಮಾನ್ಯನ್ಯಾಯದ ಗುಡಿಯಿದು ಪರಿಮಳದ ಶ್ರೀಗಂಧದ ಅರಣ್ಯ
ಕೋಮಲವಾಗಿ ಬಳುಕುವ ಬಿಳಿಯಿರುವುದೆಲ್ಲವೂ ಹಾಲಲ್ಲ ಎಂದರಂದು ಕುವೆಂಪು ಸಚಿವ ಮಂಡಲವೆಂದೂ ಶಾಶ್ವತವಲ್ಲನಂಬದಿರಿ ಕಿವಿ ಕಚ್ಚಿ ಹಾಡುವ ಹಾಲುಗಲ್ಲಎದುರಾಗುವವರೆಲ್ಲರೂ ಬಾಗುವ ಸಣ್ಣತನಗಳ ಜಾಳಲ್ಲ
ತಲ್ಲಣಿಸದಿರು ಕಂಡ್ಯ ತಾಳು ಮನವೆಂದರು ದಾಸರುಹೊರಡುವ ಹಾದಿಯೊಂದೇ ನಾವು ಭಗವಂತನ ದಾಸರುಭುವನ ಗೆದ್ದ ತಥಾಗತನಿಗೆ ಹೆಸರು ಮಂದಹಾಸರುಕಾಯಕವೇ ಕೈಲಾಸ ಬೇಕೆ ಹಂಗಿನರಮನೆಯ ಹೆಸರು ?
ವಿಚಾರಿಸಿದರೆ ತಪ್ಪು ಒಪ್ಪುಗಳ ಪ್ರಶ್ನೆ ಅನಂತಆರಾಧಿಸಿದರೆ ಸಾಕು ಸರಸ್ವತಿಯ ಏಕಾಂತದಿಗಂಬರವೇ ದಿವ್ಯಾಂಬರ ಅಕ್ಕಮಹಾದೇವಿಯ ಪಂಥತಿದ್ದಿ ಬೆಳಕಾಗಬೇಕೆನ್ನುವುದೇ ಭುವನದ ಮನುಜ ಮತ
Subscribe to:
Posts (Atom)
ಚಹಾ ಮತ್ತು ನಾನು
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...
-
'ತುಘಲಕ್'ನೊಂದಿಗೆ ಮಾತಿಗಿಳಿದಾಗ... ಪುರಾಣವನ್ನಾಧರಿಸಿದ 'ಯಯಾತಿ' ಚರಿತ್ರೆಯನ್ನಾಧರಿಸಿದ 'ತುಘಲಕ್' ನಂತಹ ಶ್ರೇಷ್ಠ ನಾಟಕಗಳನ...
-
ಚಂದ್ರಗಿರಿಯ ತೀರದಲ್ಲಿ ಮಹಿಳೆ... ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭ. ಅಂತಿಮ ವರ್ಷದ ಬಿ ಎ ತರಗತಿಯಲ್ಲಿ ( ಐಚ್ಛಿಕ ಕನ್ನಡ ವಿಷಯ) ಸ್ತ್ರೀ ಸಂವೇದನೆಯ, ಬಂಡಾಯ ಲೇಖಕ...
-
ಚಹಾ ಮತ್ತು ನಾನು ದೂರವಾಗು ಎಂದರೆ ನಮ್ಮಿಬ್ಬರಿಗೂ ಸಾಧ್ಯವೇ ಪ್ರಿಯೆ ಪ್ರಾಣದಿಂದ ಬೇರೆಯಾದವರುಂಟೆ? ಕಾಣುವುದಿಲ್ಲ ಛಾಯೆ ಆತ್ಮದಿಂದ ಹೊರನಡೆದವರುಂಟೆ ? ನೀನೊಂದು ಮಾಯೆ ರಸ...

